8:29 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ

19/10/2021, 10:15

ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.

ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.

ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಆರೋಪಿ ವಿರುದ್ಧ ಸೆಕ್ಷನ್ 376,376-2,376(2)-ಕೆ,376 ಸಿ, 511, 354(), 354(2), 354 (2), 354 (8), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು