8:57 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್, ನೆಹರು ಯುವ ಕೇಂದ್ರದ ವತಿಯಿಂದ  ಮಂಗಳೂರು ಹೃದಯ ಭಾಗದಲ್ಲಿ ಸ್ವಚ್ಛತಾ ಅಭಿಯಾನ 

20/10/2021, 11:37

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ  ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಜರುಗಿತು. 


ಮಂಗಳೂರು ವಿಶ್ವ ವಿದ್ಯಾನಿಲಯದ  ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ  ಕೆ. ಎ., ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ, ರೋಟರಿ ಕ್ಲಬ್ ನ ಡಾ. ರಂಜನ್ ಹಾಗೂ ಕಾನ್ಯೂಟ್ ಪಿಂಟೋ ಸ್ವಚ್ಛತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು. 


ಸುತ್ತ ಮುತ್ತ ಅಂಗಡಿಗಳ ಮಾಲೀಕರಿಗೆ ತಮ್ಮ ಸುತ್ತ ಮುತ್ತ ಪ್ಲಾಸ್ಟಿಕ್ ಎಸೆಯದಂತೆ ಮನವರಿಕೆ ಮಾಡಲಾಯಿತು. 


ವಿಶ್ವ ವಿದ್ಯಾನಿಲಯ ಕಾಲೇಜಿನ ಹಾಗೂ ರಥ ಬೀದಿ ಪ್ರಥಮ ದರ್ಜೆ ಕಾಲೇಜಿನ ರಾ. ಸೇ.ಯೋ ಸ್ವಯಂ ಸೇವಕ, ಸೇವಕಿಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು