7:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್, ನೆಹರು ಯುವ ಕೇಂದ್ರದ ವತಿಯಿಂದ  ಮಂಗಳೂರು ಹೃದಯ ಭಾಗದಲ್ಲಿ ಸ್ವಚ್ಛತಾ ಅಭಿಯಾನ 

20/10/2021, 11:37

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ  ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಜರುಗಿತು. 


ಮಂಗಳೂರು ವಿಶ್ವ ವಿದ್ಯಾನಿಲಯದ  ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ  ಕೆ. ಎ., ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ, ರೋಟರಿ ಕ್ಲಬ್ ನ ಡಾ. ರಂಜನ್ ಹಾಗೂ ಕಾನ್ಯೂಟ್ ಪಿಂಟೋ ಸ್ವಚ್ಛತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು. 


ಸುತ್ತ ಮುತ್ತ ಅಂಗಡಿಗಳ ಮಾಲೀಕರಿಗೆ ತಮ್ಮ ಸುತ್ತ ಮುತ್ತ ಪ್ಲಾಸ್ಟಿಕ್ ಎಸೆಯದಂತೆ ಮನವರಿಕೆ ಮಾಡಲಾಯಿತು. 


ವಿಶ್ವ ವಿದ್ಯಾನಿಲಯ ಕಾಲೇಜಿನ ಹಾಗೂ ರಥ ಬೀದಿ ಪ್ರಥಮ ದರ್ಜೆ ಕಾಲೇಜಿನ ರಾ. ಸೇ.ಯೋ ಸ್ವಯಂ ಸೇವಕ, ಸೇವಕಿಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು