8:50 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ಶುಲ್ಕದಲ್ಲಿ ಶೇ. 50 ವಿನಾಯಿತಿ ನೀಡಿ: ಸರಕಾರಕ್ಕೆ ಎನ್ ಎಸ್ ಯುಐ ಆಗ್ರಹ

27/05/2021, 20:09

ಮಂಗಳೂರು(reporterkarnataka news):  ಕೊರೊನಾ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ಮೂರು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದೆ. ಲಸಿಕೆ ಇಲ್ಲದೇ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಬೇಕು ಎಂಬ ಈ  ಮೂರು ಬೇಡಿಕೆಗಳನ್ನು ಈಡೇರಿಸುವಂತೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಸರಕಾರವನ್ನು  ಆಗ್ರಹಿಸಿದ್ದಾರೆ.

ಗುರುವಾರ ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಇದ್ದು, ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಭಯವನ್ನುಂಟು ಮಾಡಿದೆ. ಇದರ ನಡುವೆ ಪರೀಕ್ಷೆಯನ್ನು ಮಾಡುವುದಾರೆ ವಿದ್ಯಾರ್ಥಿಗಳಿಗೆ  ಪ್ರಥಮ ಆದ್ಯತೆ ನೀಡಿ ವ್ಯಾಕ್ಸಿನನ್ನು ನೀಡಬೇಕು ಅಥವಾ ಪರೀಕ್ಷೆಯನ್ನೇ ರದ್ದುಗೊಳಿಸಬೇಕು. ಸತತವಾಗಿ ಒಂದು ವರ್ಷದಿಂದ ಕೊರೊನಾ ಮಹಾಮಾರಿ ತಾಂಡವವಾಡುತ್ತಿದ್ದು. ಲಾಕ್ ಡೌನ್ ಆಗಿರಬಹುದು, ಸಾಕಷ್ಟು ಕಾಲೇಜುಗಳು ಬಂದಾಗಿರುವುದರಿಂದ ಸರ್ಕಾರದಿಂದ ಸಿಗಬೇಕಾಗಿದ್ದ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ ವಿದ್ಯಾರ್ಥಿಗಳಿಗೆ ಲಭಿಸಿಲ್ಲ. ಕೇವಲ ಆನ್ ಲೈನ್ ತರಗತಿ ಮುಖಾಂತರ ಕ್ಲಾಸ್ ಗಳು ನಡೆಯುತ್ತಿದ್ದು,  ವಿದ್ಯಾರ್ಥಿಗಳ ಶುಲ್ಕದಲ್ಲಿ ಯಾವುದೇ ರಿಯಾಯಿತಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಲಿಲ್ಲ. ಆದ್ದರಿಂದ ಪೂರ್ಣ ಪ್ರಮಾಣದ ಶುಲ್ಕವನ್ನು ಪಾವತಿಸಲು ಪೋಷಕರಿಗೆ ತೊಂದರೆಯಾಗಲಿದ್ದು,  ವಿದ್ಯಾರ್ಥಿ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಅಲ್ಲದೆ, ಕೋವಿಡ್ 19 ನಿಂದ ಅದೆಷ್ಟೋ  ವಿದ್ಯಾರ್ಥಿಗಳು ತಮ್ಮ ಆಧಾರ ಸ್ತಂಭವಾದ ಪೋಷಕರು, ಕುಟುಂಬಸ್ಥರನ್ನು  ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಅವರ ಮುಂದಿನ ಸಂಪೂರ್ಣ ಶಿಕ್ಷಣವನ್ನು ಸರಕಾರ ವಹಿಸಿಕೊಳ್ಳಬೇಕು. ಅಂತಹ ವಿದ್ಯಾರ್ಥಿಗಳ ಕೆಜಿ-ಪಿಜಿ ವರೆಗಿನ ಶಿಕ್ಷಣವನ್ನು ಸರಕಾರ ಭರಿಸಬೇಕು  ಎಂದು ಒತ್ತಾಯಿಸಿದರು.

ವಿಟಿಯು ಉಸ್ತುವಾರಿ ಅನ್ವೀತ್ ಕಟೀಲ್ ಮಾತನಾಡಿ,  ಆಫ್ ಲೈನ್ ಪರೀಕ್ಷೆ ಮಾಡುವ ಮೊದಲು ಆಫ್ ಲೈನ್  ತರಗತಿಗಳನ್ನು  45 ದಿನಗಳ ಕಾಲ ನಡೆಸಬೇಕು. ಆನ್ಲೈನ್ ನಲ್ಲಿ ಶಿಕ್ಷಣ ಕೊಟ್ಟು ಆಫ್ಲೈನ್ ಪರೀಕ್ಷೆ  ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ  ವ್ಯತ್ಯಾಸ ಆಗುತ್ತಿದೆ. ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಇಂತಹ ಶಿಕ್ಷಣ  ವ್ಯವಸ್ಥೆ ವಿದ್ಯಾರ್ಥಿಗಳಿಗೆ ತುಂಬಾ ನೋವುಂಟು ಮಾಡಿದೆ. ಆದುದರಿಂದ ವಿದ್ಯಾರ್ಥಿಗಳು ಕ್ಯಾರಿ ಓವರ್ ಪದ್ಧತಿಯನ್ನು  ಕೇಳುತ್ತಿದ್ದಾರೆ. ಹಿಂದಿನ ಸೆಮಿಸ್ಟರ್ ಪರೀಕ್ಷೆ  ಇನ್ನು ಮುಗಿದಿಲ್ಲ ಆದರೆ ಕಾಲೇಜುಗಳು ಮುಂದಿನ ಸೆಮಿಸ್ಟರ್ ತರಗತಿಗಳ್ಳನ್ನು ಆನ್ಲೈನ್ ಮೂಲಕ ಪ್ರಾರಂಭ  ಮಾಡಿದ್ದಾರೆ. ಒಬ್ಬ ವಿದ್ಯಾರ್ಥಿ ಒಂದೇ ಸೆಮಿಸ್ಟರ್ ನಲ್ಲಿ ಎಲ್ಲಾ ಸಬ್ಜೆಕ್ಟ್ ಗಳನ್ನು  ಓದುವುದು ಹೇಗೆ ಎಂದು ಪ್ರಶ್ನಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯುಐ ಉಪಾಧ್ಯಕ್ಷರಾದ ಆಸ್ಟನ್ ಸ್ವಿಕ್ವೇರಾ, ಅಂಕುಶ್ ಶೆಟ್ಟಿ, ನಿಕಿಲ್ ಪೂಜಾರಿ, ಮುಖಂಡರಾದ ಪವನ್ ಸಾಲ್ಯಾನ್, ಶಫೀಕ್, ರಿಲ್ವಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು