6:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ

20/10/2021, 22:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು.


ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಗ್ಗೆ ಭ್ರಮರಾಂಬ ದೇವಿಗೆ ಪ್ರತಿ ವರ್ಷದ ಪದ್ದತಿಯಂತೆ ಈ ವರ್ಷವೂ ಕೂಡ ಕುಂಕುಮಾರ್ಚನೆ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಹೂವಿನ ಪೂಜೆ ಅಲಂಕಾರ ನೇರವೇರಿಲಾಯಿತು. ನಂತರ ಗಣಾರಾಧನೆ ಮಹಾಪ್ರಸಾದವಾದ ಬೂಂದಿ, ಅನ್ನ ಪ್ರಸಾದ ಕಾರ್ಯಕ್ರಮ ಭಕ್ತಾದಿಗಳು ಸವಿದರು. ಮಹಾದೇವಿಯ ಪಲ್ಲಕ್ಕಿ ಸೇವೆ ಜರುಗಿತು.ಸಂಜೆ 4.15ಕ್ಕೆ ಮಹಿಳೆಯರು ಸೇರಿ ತನು-ಮನ ಕಳಸ ಕನ್ನಡಿ ಭಜನಾ ಭಕ್ತಿಯೇ ಮೂಲ ಧನದಿಂದ ಭಕ್ತಿಯ ಮೂಲಕ ದೇವಿ ಕೃಪೆಗೆ ಪಾತ್ರರಾಗಿ ದರ್ಶನ ಪಡೆದರು.ಮಹಿಳೆಯರಿಂದಲೇ ಮಹಾ ರಥೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ.

ಮಹಾದೇವಿಯ ರಥವನ್ನು ಎಳೆಯುವ ಮೂಲಕ ತಮ್ಮಲ್ಲಿ ಭಕ್ತಿ ಭಾವವನ್ನು ಆನಂದಿಸಿದರು. ಮಸ್ಕಿ ಬಳಗಾನೂರ, ಸುಂಕನೂರ, ಕಡಬೂರ,ಗುಡದೂರ, ತುರ್ವಿಹಾಳ, ಹಸ್ಮಕಲ್,ಮೆದಿಕಿನಾಳ, ಸಂತೆಕೆಲ್ಲೂರ, ಅಂಕುಶದೂಡ್ಡಿ, ಅಂತರಗಂಗೆ, ನಾಗರಬೆಂಚಿ, ಬೈಲಗುಡ್ಡ, ಹಾಲಾಪೂರ ಹಾಗೂ ಇನ್ನಿತರ ಗ್ರಾಮದ ಭಕ್ತಾದಿಗಳು ಆಗಮಿಸಿ ಶ್ರೀ ಭ್ರಮರಾಂಬ ದೇವಿಯ ದರ್ಶನ ಪಡೆದರು.


ಕಾರ್ಯಕ್ರಮಕ್ಕೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್,  ಮಹಾದೇವಪ್ಪಗೌಡ, ಪೊಲೀಸ್ ಪಾಟೀಲ್ ಮುಂತಾದವರು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು