4:06 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ

20/10/2021, 22:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು.


ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಗ್ಗೆ ಭ್ರಮರಾಂಬ ದೇವಿಗೆ ಪ್ರತಿ ವರ್ಷದ ಪದ್ದತಿಯಂತೆ ಈ ವರ್ಷವೂ ಕೂಡ ಕುಂಕುಮಾರ್ಚನೆ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಹೂವಿನ ಪೂಜೆ ಅಲಂಕಾರ ನೇರವೇರಿಲಾಯಿತು. ನಂತರ ಗಣಾರಾಧನೆ ಮಹಾಪ್ರಸಾದವಾದ ಬೂಂದಿ, ಅನ್ನ ಪ್ರಸಾದ ಕಾರ್ಯಕ್ರಮ ಭಕ್ತಾದಿಗಳು ಸವಿದರು. ಮಹಾದೇವಿಯ ಪಲ್ಲಕ್ಕಿ ಸೇವೆ ಜರುಗಿತು.ಸಂಜೆ 4.15ಕ್ಕೆ ಮಹಿಳೆಯರು ಸೇರಿ ತನು-ಮನ ಕಳಸ ಕನ್ನಡಿ ಭಜನಾ ಭಕ್ತಿಯೇ ಮೂಲ ಧನದಿಂದ ಭಕ್ತಿಯ ಮೂಲಕ ದೇವಿ ಕೃಪೆಗೆ ಪಾತ್ರರಾಗಿ ದರ್ಶನ ಪಡೆದರು.ಮಹಿಳೆಯರಿಂದಲೇ ಮಹಾ ರಥೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ.

ಮಹಾದೇವಿಯ ರಥವನ್ನು ಎಳೆಯುವ ಮೂಲಕ ತಮ್ಮಲ್ಲಿ ಭಕ್ತಿ ಭಾವವನ್ನು ಆನಂದಿಸಿದರು. ಮಸ್ಕಿ ಬಳಗಾನೂರ, ಸುಂಕನೂರ, ಕಡಬೂರ,ಗುಡದೂರ, ತುರ್ವಿಹಾಳ, ಹಸ್ಮಕಲ್,ಮೆದಿಕಿನಾಳ, ಸಂತೆಕೆಲ್ಲೂರ, ಅಂಕುಶದೂಡ್ಡಿ, ಅಂತರಗಂಗೆ, ನಾಗರಬೆಂಚಿ, ಬೈಲಗುಡ್ಡ, ಹಾಲಾಪೂರ ಹಾಗೂ ಇನ್ನಿತರ ಗ್ರಾಮದ ಭಕ್ತಾದಿಗಳು ಆಗಮಿಸಿ ಶ್ರೀ ಭ್ರಮರಾಂಬ ದೇವಿಯ ದರ್ಶನ ಪಡೆದರು.


ಕಾರ್ಯಕ್ರಮಕ್ಕೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್,  ಮಹಾದೇವಪ್ಪಗೌಡ, ಪೊಲೀಸ್ ಪಾಟೀಲ್ ಮುಂತಾದವರು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು