5:58 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ

20/10/2021, 22:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು.


ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಗ್ಗೆ ಭ್ರಮರಾಂಬ ದೇವಿಗೆ ಪ್ರತಿ ವರ್ಷದ ಪದ್ದತಿಯಂತೆ ಈ ವರ್ಷವೂ ಕೂಡ ಕುಂಕುಮಾರ್ಚನೆ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಹೂವಿನ ಪೂಜೆ ಅಲಂಕಾರ ನೇರವೇರಿಲಾಯಿತು. ನಂತರ ಗಣಾರಾಧನೆ ಮಹಾಪ್ರಸಾದವಾದ ಬೂಂದಿ, ಅನ್ನ ಪ್ರಸಾದ ಕಾರ್ಯಕ್ರಮ ಭಕ್ತಾದಿಗಳು ಸವಿದರು. ಮಹಾದೇವಿಯ ಪಲ್ಲಕ್ಕಿ ಸೇವೆ ಜರುಗಿತು.ಸಂಜೆ 4.15ಕ್ಕೆ ಮಹಿಳೆಯರು ಸೇರಿ ತನು-ಮನ ಕಳಸ ಕನ್ನಡಿ ಭಜನಾ ಭಕ್ತಿಯೇ ಮೂಲ ಧನದಿಂದ ಭಕ್ತಿಯ ಮೂಲಕ ದೇವಿ ಕೃಪೆಗೆ ಪಾತ್ರರಾಗಿ ದರ್ಶನ ಪಡೆದರು.ಮಹಿಳೆಯರಿಂದಲೇ ಮಹಾ ರಥೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ.

ಮಹಾದೇವಿಯ ರಥವನ್ನು ಎಳೆಯುವ ಮೂಲಕ ತಮ್ಮಲ್ಲಿ ಭಕ್ತಿ ಭಾವವನ್ನು ಆನಂದಿಸಿದರು. ಮಸ್ಕಿ ಬಳಗಾನೂರ, ಸುಂಕನೂರ, ಕಡಬೂರ,ಗುಡದೂರ, ತುರ್ವಿಹಾಳ, ಹಸ್ಮಕಲ್,ಮೆದಿಕಿನಾಳ, ಸಂತೆಕೆಲ್ಲೂರ, ಅಂಕುಶದೂಡ್ಡಿ, ಅಂತರಗಂಗೆ, ನಾಗರಬೆಂಚಿ, ಬೈಲಗುಡ್ಡ, ಹಾಲಾಪೂರ ಹಾಗೂ ಇನ್ನಿತರ ಗ್ರಾಮದ ಭಕ್ತಾದಿಗಳು ಆಗಮಿಸಿ ಶ್ರೀ ಭ್ರಮರಾಂಬ ದೇವಿಯ ದರ್ಶನ ಪಡೆದರು.


ಕಾರ್ಯಕ್ರಮಕ್ಕೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್,  ಮಹಾದೇವಪ್ಪಗೌಡ, ಪೊಲೀಸ್ ಪಾಟೀಲ್ ಮುಂತಾದವರು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು