10:04 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸೀರಿಯನ್ನುಟ್ಟ ಕಿನ್ನರಿಯರಿಂದ ಸೀಗೆಹುಣ್ಣಿಮೆ ಸಂಭ್ರಮ: ಅಪ್ಪಟ ಗ್ರಾಮೀಣ ಸೊಗಡಿನ ಸಣ್ಣ ಗೌರಿಹಬ್ಬ

21/10/2021, 08:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕಾಚರಣೆಗಳಿಗೆ ಲೆಕ್ಕವಿಲ್ಲ, ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಅಮವಾಸ್ಯೆ ಹುಣ್ಣಿಮೆಗೂ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುತ್ತೆ.ಅಂತೆಯೇ ಸೀಗೆಹುಣ್ಣಿಮೆ ಸಣ್ಣ ಗೌರಿಹಬ್ಬ ಎಂದು ಕರೆಸಿಕೊಳ್ಳುವ ಕಿನ್ನರಿಯರ ಹಬ್ಬವಾಗಿದೆ.

ದಸರಾ ಹಬ್ಬದ ನಂತರದಲ್ಲಿಯೇ ಗರಿಗೆದರುವ ಸೀಗೆಹುಣ್ಣಿಮೆ ಅಪ್ಪಟ ಗ್ರಾಮೀಣ ಸೊಗಡಿನ ಕಿನ್ನರಿಯರ ಹಬ್ಬವಾಗಿದೆ. 

ಕಿನ್ನರಿಯರು ಹಿರಿಯರ ಹೆಂಗಳೆಯರ ಸೀರೆಯನ್ನುಟ್ಟು, ದೀಪಗಳೊಂದಿಗೆ  ಸಕ್ಕರಾರತಿಯನ್ನು  ಇಟ್ಟುಕೊಂಡು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಶ್ರೀಗೌರಿ ಮೂರ್ತಿ ಗೆ ಬೆಳಗುವ ಸಾಂಪ್ರದಾಯಿಕ ಹಬ್ಭ ಇದಾಗಿದೆ. ಸೀಗೆ ಹುಣ್ಣಿಮೆಯಂದು ಕೂಡ್ಲಿಗಿ ಪಟ್ಟಣ ಸೇರಿದಂತೆ ಕೂಡ್ಲಿಗಿ ತಾಲೂಕು, ವಿವಿಧೆಡೆಯ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ತಮ್ಮ ಹೆತ್ತವುರು ತೊಡಿಸಿದ ಸೀರೆಯನ್ನುಟ್ಟು ಗೌರಿಯನ್ನಾರಾಧಿಸಿ ಸಂಭ್ರಮಿಸಿದರು. ಸೀಗೆ ಹುಣ್ಣಿಮೆ ಹಲವೆಡೆಗಳಲ್ಲಿ ಸೀಗೆ ಹುಣ್ಣಿಮೆ ಎಂದರೆ ಮತ್ತಿತರೆ ಕಡೆಗಳಲ್ಲಿ ಸಣ್ಣಗೌರಿಹಬ್ಬ ಎಂದೇ ಪ್ರತೀತಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು