4:13 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾಳಾವರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ  ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ 

21/10/2021, 08:54

ಕುಂದಾಪುರ(reporterkarnataka.com):  ರೈತರು ಕೃಷಿಯನ್ನು ಬಿಟ್ಟು ಹೊರಬರದಿರಲು ಸರಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಬುಧವಾರ ಕಾಳಾವರದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜಗತ್ತಿಗೆ ಕರೊನಾ ಬಂದು ಎಲ್ಲರು ಮನೆಯಲ್ಲಿದ್ದಾಗ ರೈತ ಕೃಷಿ ನಡೆಸಿದ್ದಾನೆ. ಆತ ಎಲ್ಲರ ಹಾಗೇ ಕೊರೊನಾ ಎಂದು ಮನೆಯಲ್ಲಿ ಕುಳಿತಿದ್ದರೇ ಹಸಿವಿನಿಂದ ಎಷ್ಟೋ ಜನರು ಸಾಯುತ್ತಿದ್ದರು ಎಂದರು. 

ಕೃಷಿಯಲ್ಲಿ ಬರುವ ಲಾಭಕ್ಕಿಂತ ವೈಯಕ್ತಿಕ ಖರ್ಚು ಹೆಚ್ಚಾಗಿ ಜನರು ಕೃಷಿಯ ಒಲವನ್ನು ಕಳೆದುಕೊಂಡಿದ್ದಾರೆ. ಯಂತ್ರೋಪಕರಣಗಳನ್ನು ಕೃಷಿ ಚಟುವಟಿಕೆಯಲ್ಲಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರೈತರು ಹಾಗೂ ಸಣ್ಣ ರೈತರಿಗೆ ಯಂತ್ರೋಪಕರಣಗಳು ಬಾಡಿಗೆಗೆ ದೊರಕುವಂತೆ ಬೇರೆ ಬೇರೆ ಭಾಗಗಳಲ್ಲಿ ಬಾಡಿಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ನುಡಿದರು.


ಗ್ರಾಹಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಕೃಷಿ ಯಂತ್ರಗಳ ಬಾಡಿಗೆ ಕೇಂದ್ರದಿಂದ ಈ ಭಾಗದ ರೈತರಿಗೆ ಹೆಚ್ಚು ಅನೂಕೂಲವಾಗುತ್ತದೆ. ಸಣ್ಣ ಮತ್ತಯ ಅತೀ ಸಣ್ಣ ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಈ ಯೋಜನೆ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಹೆಚ್. ಮಂಜುನಾಥ್, ಕಾಳಾವರ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರಾದ ರೂಪಾ ಜೆ ಮಾಡ, ಯೋಜನಾಧಿಕಾರಿ ವಸಂತ ಸಾಲ್ಯಾನ್, ಅಬ್ರಹಾಂ ಎಂ.ಕೆ., ಸ್ಥಳದಾನಿ ಸುಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ವಲಯದ ಧ.ಗ್ರಾ. ಯೋಜನೆಯ ಕೃಷಿ ಅಧಿಕಾರಿ‌ ಚೇತನ್ ಕಾರ್ಯಕ್ರಮ ನಿರೂಪಿಸಿದರು.  ಡಾ. ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು