1:21 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ

21/10/2021, 16:02

ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ

ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಕತ್ಲೂರು ಗ್ರಾಮ ವಿಠಲ ಮಲೆಕುಡಿಯ ಅವರನ್ನು ನಕ್ಸಲರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2012 ಮಾರ್ಚ್ ತಿಂಗಳಲ್ಲಿ ಬಂಧಿಸಲಾಗಿತ್ತು. ವಿಠಲ ಜತೆ ಅವರ ತಂದೆ ಅವರನ್ನು ಕೂಡ ದಸ್ತಗಿರಿ ಮಾಡಲಾಗಿತ್ತು. ಸುಮಾರು 4 ತಿಂಗಳು ಸೆರೆಮನೆ ವಾಸ ಅನುಭವಿಸಿದ ಜನರ್ಲಿಸಂ ವಿದ್ಯಾರ್ಥಿಯಾದ ವಿಠಲ ಮಲೆಕುಡಿಯ ಅವರು ನಂತರ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಅಂದಿನ ಸರಕಾರ ವಿಠಲ ಮಲೆಕುಡಿಯ ಅವರ ಮೇಲೆ ಸಾಕಷ್ಟು ಸಾಕ್ಷ್ಮಾಧಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡುವುದಾಗಿ ಹೇಳಿತ್ತು. ಈ ನಡುವೆ ಬೆಳ್ತಂಗಡಿ ಪೊಲೀಸರು ವಿಠಲ ಮಲೆಕುಡಿಯ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 2012ರಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಠಲ ಮಲೆಕುಡಿಯ ಅವರ ಕತ್ಲೂರು ಮನೆಯಲ್ಲಿ ದೊರಕಿದ 21 ಸಾವಿರ ರೂ. ನಗದನ್ನು ನಕ್ಸಲ್ ಚಟುವಟಿಕೆಗಾಗಿ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣ ಎಂದು ಪೊಲೀಸರು ಆರೋಪಿಸಿದ್ದರು. ಆದರೆ

ವಿಠಲ ಮಲೆಕುಡಿಯ ಅವರು ಇದು ತನ್ನ ತಂದೆ – ತಾಯಿ ದುಡಿದ ಹಣ. ಅಪ್ಪ ಅಮ್ಮನಿಗೆ ಬ್ಯಾಂಕ್ ಖಾತೆ ಇಲ್ಲದಿರುವುದರಿಂದ ಮನೆಯಲ್ಲೇ ಉಳಿತಾಯ ಮಾಡಿ ಕೂಡಿಟ್ಟ ಹಣ ಎಂದು ಸ್ಪಷ್ಟನೆ ನೀಡಿದ್ದರು. ನಂತರ ವಿಠಲ ಅವರು ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು. ನಾರಾವಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದರು.

ಇದೀಗ ಪ್ರಕರಣ ವಿಚಾರಣೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೂರ್ಣಗೊಂಡಿದ್ದು, ಇಂದು ತೀರ್ಪು ಹೊರಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು