9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ

21/10/2021, 23:02

ಗ್ವಾಲಿಯರ್(reporterkarnataka.com):

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ. ಇಂದು ಮುಂಜಾನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮೀರಜ್ 2000 ಏರ್‍ಕ್ರಾಫ್ಟ್ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನ ಪತನಗೊಂಡಿದೆ.  ವಿಮಾನ ಪತನದ ಮುನ್ಸೂಚನೆ ದೊರೆಯುತ್ತಿದ್ದಂತೆ ಪೈಲಟ್ ವಿಮಾನದಿಂದ ಪ್ಯಾರಾಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಮನಕ್‍ಭಾಗ್ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ವಿಮಾನ ಪತನವಾಯಿತು. ಪೈಲಟ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಭೀಂಡ್ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇಂದು ಮುಂಜಾನೆ ಗ್ವಾಲಿಯರ್‍ನಲ್ಲಿರುವ ಏರ್‍ಬೇಸ್‍ನಿಂದ ವಿಮಾನ ಹಾರಾಟ ಆರಂಭಿಸಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಹಾಗೂ ವಾಯುಪಡೆ ಅಕಾರಿಗಳು ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು