11:44 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು