3:25 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು