5:07 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು

22/10/2021, 18:59

ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ  ಠಾಣೆಯ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಠಾಣೆಯಲ್ಲಿ  ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ದ್ದಾರೆ ಎಂದು ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಮತ್ತು ಆತನ ತಾಯಿ ಕೂಡ ಅರೆಸ್ಟ್ ಆಗಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್ .ಎನ್ . ರಾಜೇಶ್ ಭಟ್  ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ರಾಜೇಶ್  ಅವರ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು