7:14 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ

23/10/2021, 16:49

ಅಂದು ,
ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು 
ಬಿಡದ ಹಿರಿಯರು,
ಆದರೆ ಚಿಣ್ಣರಿಗೆ ಬಲು ಆಸೆ 
ಏನಿರಬಹುದು? ಅದರಲ್ಲಿ ತಿಳಿವಾಸೆ
ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು 

ಇಂದು ,
 ಅದೇ ಹಿರಿಯರು ಬನ್ನಿ ವೀಡಿಯೋ ಪಾಠ
ನೋಡಿ ಎಂದರು
ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬಲೆಯಂತೆ
ಕಣ್ಣೆಲ್ಲ ಮಯ ಮಯ 

ಯಾರಿಗೆ ಬೇಕು ?ಈ ವಾಣಿ
ವರ್ಕ್ ಉಂಟು, ನೆಟ್ ಇಲ್ಲ, ವೈಫೈ ಹಾಕಿಲ್ಲ
ಆನ್ಲೈನ್ ಪಾಠದ ಗೋಳು ತಲೆಯೆಲ್ಲಾ ಹಾಳು  .

ಹೌದು 
ಅಂದು ಈ ಚಿಣ್ಣರು ಕಾಯುತ್ತಿದ್ದರು
ಶಾಲೆಗೆ ಯಾವಾಗ ರಜೆ.
ಇಂದು ಬಕಪಕ್ಷಿಯಂತೆ ಕಾಯುವರು
ಶಾಲೆ ಯಾವಾಗ ಎಂದು 
ಸುದ್ದಿ ಬಂತು
 ಶಾಲೆ ಆರಂಭವಾಗುವುದೆಂದು, ಕೇಳಿದ್ದೇ ತಡ ,ಚಿಣ್ಣರು
 ಸಂಚಾರಿವಾಣಿ ಯನ್ನು ಎತ್ತಿ ಹಾಕಿ 
ನಮಸ್ಕಾರ -ಎಂದಿಗೂ ನಿನ್ನ ಸಹವಾಸ ಬೇಡಪ್ಪ ಎನ್ನುತ್ತಾ 
ಖುಷಿ ಖುಷಿಯಿಂದ ಚಿಣ್ಣರೆಲ್ಲ ಒಟ್ಟುಗೂಡಿ
 ಹೆಗಲ ಮೇಲೆ ಚೀಲ ಹಾಕಿ ನಿಷ್ಕಲ್ಮಶ 
ನಗುವಿನೊಂದಿಗೆ ಹೊರಟಿದ್ದಾರೆ.

 ತರಗತಿಯಲ್ಲಿ ಪಾಠ ಕೇಳುವ ಆಸೆಯಿಂದ
 ಟೀಚರನ್ನು ನೋಡುವ ಉತ್ಸಾಹದಿಂದ
 ಗೆಳೆಯರೊಡನೆ ಆಡುವ ಆತುರದಿಂದ 
ನಗುತ್ತಾ ನಗುತ್ತಾ ಹೇಳುತ್ತಾರೆ ,ಅಯ್ಯೋ ದೇವರೇ ,ಎಂದೆಂದಿಗೂ 
ಈ ಮಾರಿ ಕೊರೋನಾ ಬಾರದಿರಲಿ .
ಸದಾಕಾಲ ನಮ್ಮ ನಡೆ ಶಾಲೆ ಕಡೆಗೆ ಇರಲಿ .   

– ಉಮಾ ಮಾಧವಿ
 ನಿವೃತ್ತ ಶಿಕ್ಷಕಿ, ಕೊಳಲಗಿರಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು