11:04 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ

23/10/2021, 16:49

ಅಂದು ,
ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು 
ಬಿಡದ ಹಿರಿಯರು,
ಆದರೆ ಚಿಣ್ಣರಿಗೆ ಬಲು ಆಸೆ 
ಏನಿರಬಹುದು? ಅದರಲ್ಲಿ ತಿಳಿವಾಸೆ
ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು 

ಇಂದು ,
 ಅದೇ ಹಿರಿಯರು ಬನ್ನಿ ವೀಡಿಯೋ ಪಾಠ
ನೋಡಿ ಎಂದರು
ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬಲೆಯಂತೆ
ಕಣ್ಣೆಲ್ಲ ಮಯ ಮಯ 

ಯಾರಿಗೆ ಬೇಕು ?ಈ ವಾಣಿ
ವರ್ಕ್ ಉಂಟು, ನೆಟ್ ಇಲ್ಲ, ವೈಫೈ ಹಾಕಿಲ್ಲ
ಆನ್ಲೈನ್ ಪಾಠದ ಗೋಳು ತಲೆಯೆಲ್ಲಾ ಹಾಳು  .

ಹೌದು 
ಅಂದು ಈ ಚಿಣ್ಣರು ಕಾಯುತ್ತಿದ್ದರು
ಶಾಲೆಗೆ ಯಾವಾಗ ರಜೆ.
ಇಂದು ಬಕಪಕ್ಷಿಯಂತೆ ಕಾಯುವರು
ಶಾಲೆ ಯಾವಾಗ ಎಂದು 
ಸುದ್ದಿ ಬಂತು
 ಶಾಲೆ ಆರಂಭವಾಗುವುದೆಂದು, ಕೇಳಿದ್ದೇ ತಡ ,ಚಿಣ್ಣರು
 ಸಂಚಾರಿವಾಣಿ ಯನ್ನು ಎತ್ತಿ ಹಾಕಿ 
ನಮಸ್ಕಾರ -ಎಂದಿಗೂ ನಿನ್ನ ಸಹವಾಸ ಬೇಡಪ್ಪ ಎನ್ನುತ್ತಾ 
ಖುಷಿ ಖುಷಿಯಿಂದ ಚಿಣ್ಣರೆಲ್ಲ ಒಟ್ಟುಗೂಡಿ
 ಹೆಗಲ ಮೇಲೆ ಚೀಲ ಹಾಕಿ ನಿಷ್ಕಲ್ಮಶ 
ನಗುವಿನೊಂದಿಗೆ ಹೊರಟಿದ್ದಾರೆ.

 ತರಗತಿಯಲ್ಲಿ ಪಾಠ ಕೇಳುವ ಆಸೆಯಿಂದ
 ಟೀಚರನ್ನು ನೋಡುವ ಉತ್ಸಾಹದಿಂದ
 ಗೆಳೆಯರೊಡನೆ ಆಡುವ ಆತುರದಿಂದ 
ನಗುತ್ತಾ ನಗುತ್ತಾ ಹೇಳುತ್ತಾರೆ ,ಅಯ್ಯೋ ದೇವರೇ ,ಎಂದೆಂದಿಗೂ 
ಈ ಮಾರಿ ಕೊರೋನಾ ಬಾರದಿರಲಿ .
ಸದಾಕಾಲ ನಮ್ಮ ನಡೆ ಶಾಲೆ ಕಡೆಗೆ ಇರಲಿ .   

– ಉಮಾ ಮಾಧವಿ
 ನಿವೃತ್ತ ಶಿಕ್ಷಕಿ, ಕೊಳಲಗಿರಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು