5:09 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರಾಜ್ಯದ ಪ್ರತಿ ಜಿಲ್ಲೆಗೂ ಸರಕಾರ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸರಕಾರ ಚಿಂತನೆ: ಸಚಿವ ಡಾ. ಅಶ್ವಥ್ ನಾರಾಯಣ 

23/10/2021, 19:27

ಕುಂದಾಪುರ(reporterkarnataka.com): ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು.

ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಇದೆ. ಶೀಘ್ರದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಕರ್ನಾಟಕ ರಾಜ್ಯದಲ್ಲಿ ೮೫% ಮೊದಲ ಡೋಸ್ ಹಾಗೂ ೪೫% ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ನಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಮೊದಲ ಡೋಸ್ ನೀಡುವಿಕೆಯಲ್ಲಿ ಐದನೇ ಸ್ಥಾನದಲ್ಲಿದೆ. 

ದುಬೈ, ಮಧ್ಯಪ್ರಾಚ್ಯ ದೇಶದಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದರಿಂದ ಹೊರದೇಶಗಳಲ್ಲಿ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಬೇಡಿಕೆ ಇದೆ. 

ಜಗ್ಗತ್ತಿನಲ್ಲಿ ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ್ದು, ಇನ್ನು ಹೆಚ್ಚಿನ ಕ್ರಾಂತಿ ಮಾಡಲು ನಮ್ಮ ಸರಕಾರ ವಿನೂತನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ರೂಪಿಸುತ್ತಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಮುಖಂಡರಾದ ರಾಜೇಶ್ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು