4:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು

27/05/2021, 23:46

ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್  ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದು, ಇದರಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಮದುವೆಯಲ್ಲಿ ಗ್ರಾಮದ ಮತ್ತು ಹೊರ ಭಾಗದ. ಹಲವು ಮಂದಿ  ಭಾಗವಹಿಸಿದ್ದಾರೆ. ಇವರಲ್ಲಿ ಕೊರೊನಾ ಸೋಂಕಿತರು ಕೂಡ ಇದ್ದರು ಎನ್ನಲಾಗಿದೆ. ಪಾವೂರು ಗ್ರಾಮದ ವ್ಯಕ್ತಿಯ ಹೆಸರಿನಲ್ಲಿ ಮದುವೆಯ ಅನುಮತಿಯನ್ನು ಪಡೆದು ಪರವೂರಿನ ಜೋಡಿಯನ್ನು ತಂದು ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ್ದು, ಈ ಮದುವೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರು ಭಾಗಿಯಾಗಿರುತ್ತಾರೆ, ಇದು ಅಲ್ಲದೆ ಹಲವಾರು ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ವೇಲೇರಿಯನ್ ಡಿಸೋಜ ಅವರು ಗ್ರಾಮದ ಹಲವಾರು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇವರ ಇಂತಹ ಬೇಜವಾಬ್ದಾರಿತನದಿಂದ ಪಾವೂರು ಗ್ರಾಮದಲ್ಲಿ ಕೊರೊನಾ ಹರಡುವ ಭೀತಿ ಉಂಟಾಗಿದೆ. ಈ ಕಾರ್ಯಕ್ರಮದ ನಂತರ ಈ ಊರಿನಲ್ಲಿ ಹಲವಾರು ಜನರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರು ಭಯಭೀತಗೊಂಡಿದ್ದಾರೆ. ಇವರನ್ನು ಕೊರೊನಾ

 ಪರೀಕ್ಷೆ ಮಾಡಿಸಬೇಡಿ ಎಂದು ಸ್ವತಃ ಟಾಸ್ಕ್ ಫೋರ್ಸ್ ಸದಸ್ಯರೇ ಮನವಿ ಮಾಡಿರುವ ಬಗ್ಗೆ ಮಾಹಿತಿ ಇದೆ.  ಪರೀಕ್ಷೆಗೆ ಒಳಪಡದ ಜನರು ರಾಜಾರೋಷವಾಗಿ ಗ್ರಾಮದಲ್ಲಿ ತಿರುಗುತ್ತಿದ್ದಾರೆ. ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಇದೆಲ್ಲಾ ಗೊತ್ತಿದ್ದೂ ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು  ಮತ್ತು ಉಪಾಧ್ಯಕ್ಷರು ಜಾಣಕುರುಡು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು