3:33 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕ್ರಷರ್ ಗಣಿಗಾರಿಕೆಯ ಕಾನೂನು ತೊಡಕು ನಿವಾರಿಸಿ ಉದ್ಯಮಸ್ನೇಹಿಯಾಗಿಸಲು ನಾವು ಬದ್ದ: ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ

23/10/2021, 19:47

ಕಾರ್ಕಳ(reporterkarnataka.com): ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ  ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು .

ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚ್ಚಾ ವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು   ವಿವಿಧ ಕೈಗಾರಿಕೆ ಕಟ್ಟಡ ಗಳಿಗೆ  ಪೂರೈಸುವ, ಕ್ವಾರಿ  ಉದ್ಯಮವು ಲಕ್ಷಾಂತರ ಜನರಿಗೆ ನೇರ ಹಾಗು ಪರೊಕ್ಷವಾಗಿ ಉದ್ಯೋಗ ವನ್ನು ನೀಡಿವೆ. ಆದರೆ ಸರಕಾರದ ಕೆಲವು ಅಸಮರ್ಪಕವಾದ ಕಾನೂನುಗಳಿಂದ ಕಚ್ಚಾವಸ್ತುಗಳ  ಸಾಗಾಣಿಕೆ ಹಾಗೂ ಕಲ್ಲುಗಣಿಗಾರಿಕೆಗಳಿಗೆ ತೊಂದರೆಯಾಗುತ್ತಿದ್ದು, ಸರಕಾರದ ಕಾಮಗಾರಿಗಳನ್ನು ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರಿಗೂ ಸಮಸ್ಯೆ ಯಾಗುತ್ತಿದ್ದು, ಅದಕ್ಕಾಗಿ  ಸರಕಾರ ಕಾನೂನು ತೊಡಕುಗಳನ್ನು ನಿವಾರಿಸಿ ಕಚ್ಚಾವಸ್ತುಗಳನ್ನು ಪೂರೈಸಲು ಅನುವು ಮಾಡಲು ಸರಕಾರ ಯೋಗ್ಯ ರೀತಿಯಲ್ಲಿ ಸ್ಪಂದಿಸಬೇಕು ಎಂದರು.   

ಎಲ್ಲ ಗುತ್ತಿಗೆದಾರರು ಎಲ್ಲಾ ವಲಯದ ಕ್ರಷರ್ ಗಳಿಂದ ಪೂರೈಕೆಯಾಗುವ ಕಚ್ಚಾವಸ್ತುಗಳನ್ನು ಪೂರೈಸುವ ಕೈಗಾರಿಗಳಿಗೂ ತನ್ನ ಚೌಕಟ್ಟಿನೊಳಗೆ ಗಣಿಗಾರಿಗೆ ಕಾನೂನು ಸ್ನೇಹಿಯಾಗಿ ನಿರ್ವಹಿಸಿ ಸರಕಾರಕ್ಕೆ ಸಂದಾಯವಾಗುವ ರಾಜಸ್ವವು ಹೆಚ್ಚುತ್ತದೆ.  ಕ್ವಾರಿ ಕ್ರಷರ್  ಉದ್ಯಮದ ಬೇಡಿಕೆ ಏನೆಂದರೆ ಕಾನೂನು ಚೌಕಟ್ಟಿನೊಳಗೆ ಉದ್ಯಮ ನಡೆಸಲು ಅವಕಾಶ ಕೊಡಿ, ಎಲ್ಲರೂ ಕಾನೂನು ಬದ್ದವಾಗಿ  ಉದ್ಯಮ ನಡೆಸಲು ತಯಾರಿದ್ದಾರೆ, ಅದಕ್ಕೆ ಪೂರಕವಾದ ನಿಯಮಗಳಿಲ್ಲ ,ಆದ್ದರಿಂದ ಗಣಿಗಾರಿಕೆ ಹಿನ್ನಡೆ ಯಾಗುತ್ತಿದೆ ಎಂದರು. ಆದರೆ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪ ಹೋರಿಸುವುದು ಸರಿಯಲ್ಲ.ಆದರೆ ಸರಕಾರದ ಕಾನೂನಿನಲ್ಲಿ ಸಮಸ್ಯೆ ಇದೆ ಆದ್ದರಿಂದ ಮುಂದಿನ ಮೂರು ತಿಂಗಳ ಒಳಗೆ ಕ್ರಷರ್ ಹಾಗೂ ಕ್ವಾರಿಗಳಿಗಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು