1:31 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕ್ರಷರ್ ಗಣಿಗಾರಿಕೆಯ ಕಾನೂನು ತೊಡಕು ನಿವಾರಿಸಿ ಉದ್ಯಮಸ್ನೇಹಿಯಾಗಿಸಲು ನಾವು ಬದ್ದ: ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ

23/10/2021, 19:47

ಕಾರ್ಕಳ(reporterkarnataka.com): ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ  ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು .

ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚ್ಚಾ ವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು   ವಿವಿಧ ಕೈಗಾರಿಕೆ ಕಟ್ಟಡ ಗಳಿಗೆ  ಪೂರೈಸುವ, ಕ್ವಾರಿ  ಉದ್ಯಮವು ಲಕ್ಷಾಂತರ ಜನರಿಗೆ ನೇರ ಹಾಗು ಪರೊಕ್ಷವಾಗಿ ಉದ್ಯೋಗ ವನ್ನು ನೀಡಿವೆ. ಆದರೆ ಸರಕಾರದ ಕೆಲವು ಅಸಮರ್ಪಕವಾದ ಕಾನೂನುಗಳಿಂದ ಕಚ್ಚಾವಸ್ತುಗಳ  ಸಾಗಾಣಿಕೆ ಹಾಗೂ ಕಲ್ಲುಗಣಿಗಾರಿಕೆಗಳಿಗೆ ತೊಂದರೆಯಾಗುತ್ತಿದ್ದು, ಸರಕಾರದ ಕಾಮಗಾರಿಗಳನ್ನು ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರಿಗೂ ಸಮಸ್ಯೆ ಯಾಗುತ್ತಿದ್ದು, ಅದಕ್ಕಾಗಿ  ಸರಕಾರ ಕಾನೂನು ತೊಡಕುಗಳನ್ನು ನಿವಾರಿಸಿ ಕಚ್ಚಾವಸ್ತುಗಳನ್ನು ಪೂರೈಸಲು ಅನುವು ಮಾಡಲು ಸರಕಾರ ಯೋಗ್ಯ ರೀತಿಯಲ್ಲಿ ಸ್ಪಂದಿಸಬೇಕು ಎಂದರು.   

ಎಲ್ಲ ಗುತ್ತಿಗೆದಾರರು ಎಲ್ಲಾ ವಲಯದ ಕ್ರಷರ್ ಗಳಿಂದ ಪೂರೈಕೆಯಾಗುವ ಕಚ್ಚಾವಸ್ತುಗಳನ್ನು ಪೂರೈಸುವ ಕೈಗಾರಿಗಳಿಗೂ ತನ್ನ ಚೌಕಟ್ಟಿನೊಳಗೆ ಗಣಿಗಾರಿಗೆ ಕಾನೂನು ಸ್ನೇಹಿಯಾಗಿ ನಿರ್ವಹಿಸಿ ಸರಕಾರಕ್ಕೆ ಸಂದಾಯವಾಗುವ ರಾಜಸ್ವವು ಹೆಚ್ಚುತ್ತದೆ.  ಕ್ವಾರಿ ಕ್ರಷರ್  ಉದ್ಯಮದ ಬೇಡಿಕೆ ಏನೆಂದರೆ ಕಾನೂನು ಚೌಕಟ್ಟಿನೊಳಗೆ ಉದ್ಯಮ ನಡೆಸಲು ಅವಕಾಶ ಕೊಡಿ, ಎಲ್ಲರೂ ಕಾನೂನು ಬದ್ದವಾಗಿ  ಉದ್ಯಮ ನಡೆಸಲು ತಯಾರಿದ್ದಾರೆ, ಅದಕ್ಕೆ ಪೂರಕವಾದ ನಿಯಮಗಳಿಲ್ಲ ,ಆದ್ದರಿಂದ ಗಣಿಗಾರಿಕೆ ಹಿನ್ನಡೆ ಯಾಗುತ್ತಿದೆ ಎಂದರು. ಆದರೆ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪ ಹೋರಿಸುವುದು ಸರಿಯಲ್ಲ.ಆದರೆ ಸರಕಾರದ ಕಾನೂನಿನಲ್ಲಿ ಸಮಸ್ಯೆ ಇದೆ ಆದ್ದರಿಂದ ಮುಂದಿನ ಮೂರು ತಿಂಗಳ ಒಳಗೆ ಕ್ರಷರ್ ಹಾಗೂ ಕ್ವಾರಿಗಳಿಗಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು