1:32 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ   ತಡೆಗೋಡೆ ನಿರ್ಮಾಣ

24/10/2021, 09:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ.

ಅಧಿಕಾರಿಗಳಲ್ಲಿ ನಾಗರಿಕರು ಹಲವು ಬಾರಿ ವಿನಂತಿ ಮಾಡಿದರೂ ಕ್ಯಾರೇ ಮಾಡದಿರುವುದನ್ನು ಕಂಡು ನಾಗರಿಕರು ಮಾಧ್ಯಮಗಳ ಮೊರೆ ಹೋಗಿದ್ದರು. 

ತಡೆಗೋಡೆ ಇಲ್ಲದೆ ಸಂಭವಿಸಬಹುದಾದ ಅಪಾಯದ ಕುರಿತು ರಿಪೋರ್ಟರ್ ಕರ್ನಾಟಕ ಚಿತ್ರ ಸಹಿತ ಸಮಗ್ರ ವರದಿ ಪ್ರಕಟಿಸಿತ್ತು.

ತಡೆಗೋಡೆ ನಿರ್ಮಿಸದೇ ಗುತ್ತೇದಾರು ಹಾಗೆ ಕೆಲಸ ನಿಲ್ಲಿಸಿದ್ದರು. ಬಿಲ್ ಕೂಡ ಪಾವತಿ ಆಗಿತ್ತು.

ಎಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನಕ್ಕೆ ಬಂದಿರಲಿಲ್ಲ. ರಿಪೋರ್ಟರ್ ಕರ್ನಾಟಕ ಸೇರಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸೇತುವೆಗೆ ತಡೆಗೋಡೆ ನಿರ್ಮಿಸಿದ್ದಾರೆ. 

ತಡೆಗೋಡೆ ಇಲ್ಲದ ಸೇತುವೆ ತುಂಬಾ ಅಪಾಯಕಾರಿಯಾಗಿತ್ತು. ವಾಹನ ಸವಾರರು ಸ್ವಲ್ಪ ಯಾಮಾರಿಸಿದರೂ ಗುಂಡಿಗೆ ಬೀಳುವುದು ಖಂಡಿತಾ. ಅದಲ್ಲದೆ ಸಮೀಪದಲ್ಲೇ ಶಾಲೆ ಇದೆ. ಇಲ್ಲಿನ ನೂರಾರು ಮಕ್ಕಳು ಇದೇ ದಾರಿಯಾಗಿ ತೆರಳುತ್ತಿದ್ದರು. ಕೆಲವು ಮಕ್ಕಳು ಕುತೂಹಲದಿಂದ ಕೆಳಗೆ ಇಣುಕುವ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು