9:47 PM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ   ತಡೆಗೋಡೆ ನಿರ್ಮಾಣ

24/10/2021, 09:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ.

ಅಧಿಕಾರಿಗಳಲ್ಲಿ ನಾಗರಿಕರು ಹಲವು ಬಾರಿ ವಿನಂತಿ ಮಾಡಿದರೂ ಕ್ಯಾರೇ ಮಾಡದಿರುವುದನ್ನು ಕಂಡು ನಾಗರಿಕರು ಮಾಧ್ಯಮಗಳ ಮೊರೆ ಹೋಗಿದ್ದರು. 

ತಡೆಗೋಡೆ ಇಲ್ಲದೆ ಸಂಭವಿಸಬಹುದಾದ ಅಪಾಯದ ಕುರಿತು ರಿಪೋರ್ಟರ್ ಕರ್ನಾಟಕ ಚಿತ್ರ ಸಹಿತ ಸಮಗ್ರ ವರದಿ ಪ್ರಕಟಿಸಿತ್ತು.

ತಡೆಗೋಡೆ ನಿರ್ಮಿಸದೇ ಗುತ್ತೇದಾರು ಹಾಗೆ ಕೆಲಸ ನಿಲ್ಲಿಸಿದ್ದರು. ಬಿಲ್ ಕೂಡ ಪಾವತಿ ಆಗಿತ್ತು.

ಎಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನಕ್ಕೆ ಬಂದಿರಲಿಲ್ಲ. ರಿಪೋರ್ಟರ್ ಕರ್ನಾಟಕ ಸೇರಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸೇತುವೆಗೆ ತಡೆಗೋಡೆ ನಿರ್ಮಿಸಿದ್ದಾರೆ. 

ತಡೆಗೋಡೆ ಇಲ್ಲದ ಸೇತುವೆ ತುಂಬಾ ಅಪಾಯಕಾರಿಯಾಗಿತ್ತು. ವಾಹನ ಸವಾರರು ಸ್ವಲ್ಪ ಯಾಮಾರಿಸಿದರೂ ಗುಂಡಿಗೆ ಬೀಳುವುದು ಖಂಡಿತಾ. ಅದಲ್ಲದೆ ಸಮೀಪದಲ್ಲೇ ಶಾಲೆ ಇದೆ. ಇಲ್ಲಿನ ನೂರಾರು ಮಕ್ಕಳು ಇದೇ ದಾರಿಯಾಗಿ ತೆರಳುತ್ತಿದ್ದರು. ಕೆಲವು ಮಕ್ಕಳು ಕುತೂಹಲದಿಂದ ಕೆಳಗೆ ಇಣುಕುವ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು