9:31 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ   ತಡೆಗೋಡೆ ನಿರ್ಮಾಣ

24/10/2021, 09:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ.

ಅಧಿಕಾರಿಗಳಲ್ಲಿ ನಾಗರಿಕರು ಹಲವು ಬಾರಿ ವಿನಂತಿ ಮಾಡಿದರೂ ಕ್ಯಾರೇ ಮಾಡದಿರುವುದನ್ನು ಕಂಡು ನಾಗರಿಕರು ಮಾಧ್ಯಮಗಳ ಮೊರೆ ಹೋಗಿದ್ದರು. 

ತಡೆಗೋಡೆ ಇಲ್ಲದೆ ಸಂಭವಿಸಬಹುದಾದ ಅಪಾಯದ ಕುರಿತು ರಿಪೋರ್ಟರ್ ಕರ್ನಾಟಕ ಚಿತ್ರ ಸಹಿತ ಸಮಗ್ರ ವರದಿ ಪ್ರಕಟಿಸಿತ್ತು.

ತಡೆಗೋಡೆ ನಿರ್ಮಿಸದೇ ಗುತ್ತೇದಾರು ಹಾಗೆ ಕೆಲಸ ನಿಲ್ಲಿಸಿದ್ದರು. ಬಿಲ್ ಕೂಡ ಪಾವತಿ ಆಗಿತ್ತು.

ಎಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನಕ್ಕೆ ಬಂದಿರಲಿಲ್ಲ. ರಿಪೋರ್ಟರ್ ಕರ್ನಾಟಕ ಸೇರಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸೇತುವೆಗೆ ತಡೆಗೋಡೆ ನಿರ್ಮಿಸಿದ್ದಾರೆ. 

ತಡೆಗೋಡೆ ಇಲ್ಲದ ಸೇತುವೆ ತುಂಬಾ ಅಪಾಯಕಾರಿಯಾಗಿತ್ತು. ವಾಹನ ಸವಾರರು ಸ್ವಲ್ಪ ಯಾಮಾರಿಸಿದರೂ ಗುಂಡಿಗೆ ಬೀಳುವುದು ಖಂಡಿತಾ. ಅದಲ್ಲದೆ ಸಮೀಪದಲ್ಲೇ ಶಾಲೆ ಇದೆ. ಇಲ್ಲಿನ ನೂರಾರು ಮಕ್ಕಳು ಇದೇ ದಾರಿಯಾಗಿ ತೆರಳುತ್ತಿದ್ದರು. ಕೆಲವು ಮಕ್ಕಳು ಕುತೂಹಲದಿಂದ ಕೆಳಗೆ ಇಣುಕುವ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು