11:07 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು