9:20 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು