8:11 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು