5:46 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು