1:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಟ್ವೆಂಟಿ-20 ವಿಶ್ವಕಪ್ ಸೂಪರ್ -12 ಪಂದ್ಯ: ಪಾಕಿಗೆ ಭಾರತದ ವಿರುದ್ಧ 10 ವಿಕೆಟ್ ಗಳ ಗೆಲುವು 

25/10/2021, 00:07

ದುಬೈ(reporterkarnataka.com): ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ (ಔಟಾಗದೆ 68)ಹಾಗೂ ಮುಹಮ್ಮದ್ ರಿಝ್ವಾನ್ (ಔಟಾಗದೆ 78) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.  

ಟ್ವೆಂಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕ್ ಮೊದಲ ಬಾರಿ ಗೆಲುವಿನ ನಗೆ ಬೀರಿತು.

ಬಾಬರ್ ಆಝಂ ಹಾಗೂ ರಿಝ್ವಾನ್ ಪಾಕಿಸ್ತಾನ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಆಝಂ 40 ಎಸೆತಗಳಲ್ಲಿ(4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.)ಅರ್ಧಶತಕಗಳನ್ನು ಪೂರೈಸಿದರು.

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್  ಮಾಡಿದ ಭಾರತವು ಪವರ್ ಪ್ಲೇ ವೇಳೆ ಅಗ್ರ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು