11:49 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಬೆಳ್ವೆ ಚರ್ಚ್ ಫಾದರ್ ವಿರುದ್ಧ ಅನುಯಾಯಿಗಳಿಂದ ಪ್ರತಿಭಟನೆ: ಕ್ರೈಸ್ತ ಧರ್ಮದಿಂದ ಮತಾಂತರ ಎಚ್ಚರಿಕೆ

25/10/2021, 08:34

ಕುಂದಾಪುರ(reporterkarnataka.com): ಬೆಳ್ವೆಯ ಚರ್ಚ್ ನ ಫಾದರ್ ವಿರುದ್ದ ಚರ್ಚ್ ಅನುಯಾಯಿಗಳು ಅಸಮಾಧಾನ ಹೊರ ಹಾಕಿ ಭಾನುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುಣಾಕರ್ ಶೆಟ್ಟಿ, ಇದು ಕೇವಲ ಒಂದು ಧರ್ಮದ ವಿಚಾರವಲ್ಲ. ಸಾಮರಸ್ಯದಿಂದ ಇರುವ ಚರ್ಚಿನ ಅನುಯಾಯಿಗಳಿಗೆ ತೊಂದರೆ ಆದರೆ ಬೆಳ್ವೆ ಗ್ರಾಮದ ಪ್ರತಿಯೊಬ್ಬರು ಇವರ ಪರ ನಿಲ್ಲುತ್ತಾರೆ. ಇವರಿಗೆ ತೊಂದರೆ ನೀಡುತ್ತಿರುವ ಫಾದರ್ ಅಲೆಕ್ಸಾಂಡರ್ ಲೂವೀಸ್ ಈ ಹಿಂದೆ ತಲ್ಲೂರಿನಲ್ಲಿ ಗಲಾಟೆ ಮಾಡಿಕೊಂಡು ಬಂದು ಇಲ್ಲಿಗೆ ವರ್ಗಾವಣೆಗೊಂಡವರು. ಇಲ್ಲಿಯೂ ಅದೇ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ ಎಂದರು.

ಚರ್ಚ್ ನ ಅನುಯಾಯಿ ಪ್ರವೀಣಾ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ಇಲ್ಲಿ ಅಶಾಂತಿ ನೆಲೆಸಿದೆ. ಫಾದರ್ ಅಲೆಗ್ಸಾಂಡರ್ ಲೂವಿಸ್ ನಮಗೆ ಚರ್ಚ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಡುತ್ತಿಲ್ಲ. ನಾವು ಕಟ್ಟಿದ ಚರ್ಚ್ ನ ಕಟ್ಟಡಕ್ಕೆ ಹಾನಿ ಮಾಡುತ್ತಿದ್ದಾರೆ. ಉಡುಪಿ ಧರ್ಮಾಧ್ಯಕ್ಷರಿಗೆ ಮನವಿ ಮಾಡಿದರೇ ನಮಗೆ ನ್ಯಾಯ ದೊರಕಿಸಿ ಕೊಡಲಿಲ್ಲ. ಒಂದು ವೇಳೆ ವಾರದೊಳಗೆ ಅಲೆಗ್ಸಾಂಡರ್ ಅನ್ನು ವರ್ಗಾವಣೆ ಮಾಡದೇ ಇದ್ದರೇ ನಾವು ಕ್ರಿಶ್ಚಿಯನ್ ಧರ್ಮವನ್ನು ಬಿಟ್ಟು ಹೋಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು