11:24 AM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ

25/10/2021, 11:59

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ. ಈಗಲಾಗಲೇ 10 ತಲೆಮಾರುಗಳನ್ನು ಕಂಡ ಮಠದಲ್ಲಿ 11ನೇ ಗುರುಗಳಾಗಿ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಕಾರ್ಯಭಾರ ನಡೆಸುತ್ತಿದ್ದಾರೆ.

ಭಕ್ತರ ಇಷ್ಟಾರ್ಥ ನೆರವೇರಿಸುವ ಸೋಮಲಿಂಗ ಜತೆಗೆ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭಕ್ತ ಸೇವೆಯಿಂದ ಆರಂಭಗೊಂಡು ಭಕ್ತಿ ಸೇವೆಯನ್ನು ವಿಧಿವತ್ತಾಗಿ ನಡೆಸುತ್ತಿದ್ದಾರೆ. ಇದರಿಂದಲೇ ಒಡೆಯಾರ್ ಸ್ವಾಮೀಜಿ ಅಂದ್ರೆ ನಾಡಿನುದ್ಧಗಲಕ್ಕೂ ಪ್ರಸಿದ್ಧಿ ಮತ್ತು ಭಕ್ತರಿಗೆ ಅಚ್ಚುಮೆಚ್ಚು.

ದೇವಾಲಯದಲ್ಲಿ ಸೋಮೇಶ್ವರನಿಗೆ ನಿತ್ಯ ಪೂಜೆ ನಡೆಯುತ್ತದೆ. ಹಾಗೆ ಮಠದಲ್ಲಿ ಗುರುಪೀಠದ ಸೇವೆ, ನಿತ್ಯ ಪೂಜೆ ಸಾಂಗವಾಗಿ ನಡೆಯುತ್ತಿದೆ.

ಮಠದಲ್ಲಿ ಭಕ್ತರಿಗೆ ಸ್ವಾಮೀಜಿ ಪ್ರತಿ ದಿನ ಸಂಜೆ ದರ್ಶನ ಕೊಡುತ್ತಾರೆ. ಹರಕೆ ಹೊತ್ತ ಭಕ್ತರು ಇಲ್ಲಿಗೆ ಬಂದು ಗುರುಗಳ ಪಾದಪೂಜೆ ನೆರವೇರಿಸುತ್ತಾರೆ. ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಗುರುಗಳು ಸೋಮಲಿಂಗನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಈಗಿನ 11ನೇ ತಲೆಮಾರಿನ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಅವರು ಗುರುಪೀಠವನ್ನು ಅಲಂಕರಿಸಿದ ಬಳಿಕ ಪೀಠಕ್ಕೆ ಹೊಸ ಕಳೆ ಬಂದಿದೆ. 10 ತಲೆಮಾರಿನಿಂದ ಹಿಂದಿನ ಗುರುಗಳು

ಮಠದಲ್ಲಿ ನಡೆದುಕೊಂಡು ಬರುತ್ತಿರುವ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಚಾಚು ತಪ್ಪದೆ ಪಾಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಸಾರ ಪೀಠವಾದ ಇಲ್ಲಿನ ಮಠದ ದೇವೇಂದ್ರ ಒಡೆಯಾರ್ ಸ್ವಾಮೀಜಿ ದೇವರ ಮತ್ತು ಭಕ್ತರ ಇಷ್ಟಾರ್ಥಕ್ಕನುಗುಣವಾಗಿ ಮಠವನ್ನು ಮುನ್ನಡೆಸುತ್ತಿದ್ದಾರೆ.

ಸ್ವಾಮೀಜಿಯವರು ಸೋಮಲಿಂಗೇಶ್ವರನ ಅಪ್ಪಣೆಯಂತೆ ಅನಾಥರಿಗೆ ಆಶ್ರಮ ನಿರ್ಮಿಸಿದ್ದಾರೆ. ಅದರ ಜತೆಗೆ ಶಿವನ ಬೃಹತ್ ಲಿಂಗವನ್ನು ಪ್ರತಿಷ್ಠಾಪಿಸುವ ಸಂಕಲ್ಪ ಹೊಂದಿದ್ದಾರೆ. ಸುಮಾರು ಒಂದು ಎರಕೆ ಪ್ರದೇಶದಲ್ಲಿ 108 ಅಡಿ ಎತ್ತರದ ಬೃಹತ್ ಶಿವಲಿಂಗ ತಲೆ ಎತ್ತಿ ಇಡೀ ವಿಜಯಪುರ ಜಿಲ್ಲೆ ಮಾತ್ರವೇಕೆ ಇಡೀ ರಾಜ್ಯವನ್ನು ಪಾವನಗೊಳಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು