9:28 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು