7:34 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು