9:20 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು