7:26 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು