5:36 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!!

25/10/2021, 22:17

ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ. ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ವ್ಯಂಗ್ಯ ವಾಗಿ ಸಭೆಯಲ್ಲಿ ಸದಸ್ಯರನ್ನು ನಗಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು.  ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು