2:40 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!!

25/10/2021, 22:17

ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ. ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ವ್ಯಂಗ್ಯ ವಾಗಿ ಸಭೆಯಲ್ಲಿ ಸದಸ್ಯರನ್ನು ನಗಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು.  ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು