7:00 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು