4:08 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು