2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು