4:58 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು