10:43 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು