5:48 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು