7:44 PM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು