1:25 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು