12:35 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು