4:06 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ

26/10/2021, 19:55

ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ.

ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀನು ಬಲು ಅಪರೂಪ. ಅರಬ್ಬಿ ಸಮುದ್ರದಲ್ಲಿ ಅತಿ ಅಪರೂಪಕ್ಕೆ ಕಾಣ ಸಿಗುತ್ತದೆ. ಜೊತೆಗೆ ಈ ಮೀನು ಸದ್ಯ ಅಳಿವಿನಂಚಿನಲ್ಲಿದೆ.

ಸಣ್ಣಪುಟ್ಟ ಮೀನು ಹಿಡಿಯಲು ಹಾಕಿದ್ದ ಬಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಮೀನು ಬಿದ್ದಿರುವುದು ಮೀನುಗಾರರ ಅಚ್ಚರಿಗೂ ಕಾರಣವಾಗಿದೆ. ಬಲೆಗೆ ಬಿದ್ದ ಅಪರೂಪದ ಸಮುದ್ರ ಜೀವಿ ಕಂಡು ಸಂತಸ ಪಟ್ಟ ಮೀನುಗಾರರು ವೇಲ್ ಶಾರ್ಕ್ ನ್ನು ಮರಳಿ ಕಡಲಿಗೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು