3:09 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಟಿ20 ಕ್ರಿಕೆಟ್ ಟೂರ್ನಿ: ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಅಭಿಮಾನಿಗಳು; ಮತ್ತೆ ಗರ್ಜಿಸಿ ಹ್ಯಾಷ್ ಟ್ಯಾಗ್! 

26/10/2021, 21:24

ಬೆಂಗಳೂರು(reporterkarnataka.com): ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು # ಮತ್ತೆ ಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ. 

ಸಾಮಾಜಿಕ ಜಾಲತಾಣ ‘ಕೂ’ ನಲ್ಲಿ ಈ ಕುರಿತು ಕ್ರಿಕೆಟಿಗರು ಹಾಗು ಸಾಕಷ್ಟು ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು  ವ್ಯಕ್ತಪಡಿಸಿದ್ದಾರೆ. 

‘ಭಾರತ ಮತ್ತಷ್ಟು ಗಟ್ಟಿಯಾಗಿ ಹೊರಮೊಮ್ಮಲಿದೆ’ ಎಂದು ಕ್ರಿಕೆಟಿಗ ವ್ರಿದ್ಧಿಮಾನ್ ಸಾಹ ಅಭಿಪ್ರಾಯಪಟ್ಟಿದ್ದಾರೆ. 

‘ಮತ್ತೊಮ್ಮೆ ನಿಮ್ಮ ಆರ್ಭಟವನ್ನು ತೋರಿಸಿ ಗಟ್ಟಿಯಾಗಿ #ಮತ್ತೆ ಘರ್ಜಿಸಿ ಆದ್ರೆ ಮೊನ್ನೆಯ ಸಪ್ಪೆಯಾದ ಘರ್ಜನೆ ಮಾತ್ರ ಮಾಡಬ್ಯಾಡ್ರಿ. ಹುಲಿಯ ಬೇಟೆ ತಪ್ಪಿದ ಮಾತ್ರಕ್ಕೆ ಉಪವಾಸ ಇರಲ್ಲ ಮತ್ತೊಂದು ದಿನ ಭರ್ಜರಿ ಬೇಟೆ ಇದ್ದೇ ಇರತ್ತೆ’ ರಾಜನಂದಿನಿ  ಎನ್ನುವವರು ಕೂ ಮಾಡಿದ್ದಾರೆ. 

:ಪಾಕ್ ವಿರುದ್ಧದ ಸೋಲನ್ನ ಮರೆಸುವ ಪ್ರೊಸೆಸ್ ಶುರುವಾಗ್ಲಿ’ ಎಂದು ಸುನೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಗೆಲುವು ಸಾಧಿಸುತ್ತದೆಯೇ ಎನ್ನುವ ಕ್ರಿಕೆಟ್ ಅಭಿಮಾನಿಯೊಬ್ಬರ ಪ್ರಶ್ನೆಗೆ ಸಾಕಷ್ಟು ಮಂದಿ ಗೆಲುವು ಪಕ್ಕಾ ಎಂದು ಓಟ್ ಮಾಡಿದ್ದಾರೆ. 

‘ಭಾರತ ತಂಡದಲ್ಲಿ ಯಾವುದೇ ಸಮಸ್ಯೆಯಿಲ್ಲ ತಂಡ ಸದೃಢವಾಗಿದೆ ಆದರೆ, ಮೊನ್ನೆಯ ಪಂದ್ಯ ಕೆಲವು ಚಿಕ್ಕಪುಟ್ಟ ತಪ್ಪುಗಳಿಂದ ಸೋತಿರಬಹುದು ಆದರೆ, ಪುನಃ ಭಾರತ ತಂಡ ಫೀನಿಕ್ಸ್ ನಂತೆ ಎದ್ದು ಬರಲಿದೆ ಎಂಬ ವಿಸ್ವಾಸವಿದೆ’ ಎಂದು ಕಾರ್ತಿಕ್ ಎನ್ನುವವರು ಕೂ ಮಾಡಿದ್ದಾರೆ. 

‘ಮುಂಬರಲಿರುವ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಕ್ರಿಕೆಟ್ ಪ್ರಿಯರ ಹಾರೈಕೆಯೊಂದಿಗೆ! ಭಾರತ ಗೆಲ್ಲುವ ಮೂಲಕ ಪುಟಿದೇಳಲಿದೆ!’ ಎಂದು ನರೇಶ್ ಎನ್ನುವವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು