8:50 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುವ ಸಹಕಾರ ಸಂಘಗಳ ಉಪನಿಬಂಧಕ ವೆಂಕಟೇಶ್ ಅಮಾನತುಗೊಳಿಸಿ: ಶಾಸಕಿ ರೂಪಕಲಾ ಆಗ್ರಹ 

27/10/2021, 08:24

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ( ಟಿಎಪಿಸಿಎಂಎಸ್ ) ವಿಭಜನೆಯಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಸಹಕಾರ ಸಂಘಗಳ ಉಪ ನಿಬಂಧಕ ವಂಕಟೇಶ್‌ನನ್ನು ಕೂಡಲೇ ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಶಾಸಕಿ ರೂಪಕಲಾ ಶಶಿಧರ್‌ ಆಗ್ರಹಿಸಿದರು.

ಶಾಸಕಿಯ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ರೈತರು , ಮಹಿಳೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

 ಇಲ್ಲಿನ ಸಹಕಾರ ಸಂಘಳ ಉಪ ನಿಬಂಧಕರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರು , ಮಹಿಳೆಯರು ರಾಜಕೀಯ ಪಕ್ಷದ ಏಜೆಂಟರಂತೆ ಉಪನಿಬಂಧಕ ವೆಂಕಟೇಶ್ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಹಿಳೆಯರು , ಆಡಳಿತ ಪಕ್ಷದ ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿದರು . ಬಂಗಾರಪೇಟೆ ಟಿಎಪಿಸಿಎಎಸ್ ನಿಂದ ವಿಭಜನೆಯಾಗಿ ಕೆ.ಜಿ.ಎಫ್ ಕ್ಷೇತ್ರಕ್ಕೆ ಪ್ರತ್ಯೇಕ ಟಿಎಪಿಸಿಎಂಎಸ್ ರಚನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹಾಕಲಾಗಿತ್ತು . ಇದಕ್ಕೆ ಸ್ಪಂದಿಸಿರುವ ಸರ್ಕಾರ ಪ್ರತ್ಯೇಕ ಮಾಡಲು ಅವಕಾಶ ನೀಡಿದೆ. 

ಆದರೆ ಉಪ ನಿಬಂಧಕರು ಕಾನೂನು ಪಾಲನೆ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ , ಉಪನಿಬಂಧ ಮಂಕಟೇಶ್ ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. 

ಸಹಕಾರ ಇಲಾಖೆ ಉಪ ನಿಬಂಧಕ ವೆಂಕಟೇಶ್ ಕಾನೂನು ಪಾಲನೆ ಮಾಡದ ಏಕ ಪಕ್ಷೀಯವಾಗಿ ಮಾಜಿ ಶಾಸಕ ಸಂಪಂಗಿರವರ ಮಗ ಪ್ರವೀಣ್‌ರನ್ನು ಚೀಫ್ ಪ್ರಮೋಟರ್ ಆಗಿ ನೇಮಿಸಿಕೊಂಡಿದ್ದಾರೆ . ಅವರೇನು ಇಲಾಖೆಯ ಬೋಕರ್ ವಿಜು ಎಂದು ಪ್ರಶ್ನಿಸಿದರು. ಯಾವುದೇ ನೂಟಿಫಿಕೇಷನ್‌ ಮಾಡದ , ಹಳ ಷೇರುದಾರರ ಸಭೆ ನಡೆಸದ ಹಾಗೂ ಹೊಸ ಷೇರುಗಳನ್ನು ಪಡದಂತೆ ತೋರಿಸಿ , ಸರ್ವಾಧಿಕಾರಿಯಂತೆ ನಡೆದುಕೊಳ್ಳಿತ್ತಿರುವ ಉಪನಿಬಂಧರನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು .

ಕೆಜಿಎಫ್ ತಾಲ್ಲೂಕಾಗಿ ರಚನೆಯಾದ ಮೇಲೆ ಹಂತಹಂತವಾಗಿ ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಸಹಕಾರ ಸಂಘಗಳ ಉಪ ನಿಬಂಧಕರು ಆಡಳಿತ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ . ರೈತರನ್ನು ಕತ್ತಲಲ್ಲಿಟ್ಟು ಅವರಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು . ಪ್ರತಿಭಟನಾ ಸ್ಥಳಕ್ಕೆ ಡಿಆರ್‌ ವೆಂಕಟೇಶ್ ಬರಬೇಕು ಎಂದು ಪಟ್ಟು ಹಿಡಿದರು. ಆದರೆ ಎರಡು ಮೂರು ತಾಸು ಕಳೆದು ಹೊರ ಬಾರದ ಕಾರಣ ತಾಳ್ಮೆ ಕಳೆದುಕೊಂಡ ಪ್ರತಿಭಟನಾಕಾರರು ಕಚೇರಿಯೊಳಗೆ ನುಗ್ಗಿ ವೆಂಕಟೇಶ್ ನಾಮಫಲಕ ಹಾನಿಪಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ಶಾಸಕ ರೂಪಶಶಿಧರ್‌ ಬೆಂಗಳೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಜೆ.ಆರ್‌.ಅಶ್ವಥ್‌ರವರಿಗೆ ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಳಗಿನಿಂದಲೂ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಅವರ ಧೋರಣೆ ಏನು . ? ಕೆ.ಜಿ.ಎಫ್ ಕ್ಷೇತ್ರದ ರೈತರೆಂದರೆ ಅವರಿಗೆ ಏಕೆ ಅಸಡ್ಡೆ ಎಂದು ಪ್ರಶ್ನಿಸಿದರು . ಬೇಜವಾಬ್ದಾರಿ ಡಿ.ಆರ್ ಸ್ಥಳಕ್ಕೆ ಆಗಮಿಸಿ ರೈತರಿಗೆ ಸಮಜಾಯಿಷಿ ನೀಡುವವರೆಗೆ ಸ್ಥಳ ಬಿಟ್ಟು ಹೋಗುವುದಿಲ್ಲ. ನಮ್ಮ ಕ್ಷೇತ್ರದ ರೈತರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಸಲಾಗುತ್ತದೆ. ಡಿ.ಆರ್. ವೆಂಕಟೇಶ್‌ನನ್ನು ಸೇವೆಯಿಂದ ಅಮಾನತ್ತುಪಡಿಸಿ ರೈತರಿಗೆ ನ್ಯಾಯದೊರಕಿಸಿಕೊಡಬೇಕು ಎಂದು ತಾಕೀತು ಮಾಡಿದರು . ಪ್ರಮೋಟರ್‌ನ್ನು ನೇಮಿಸಿರುವುದನ್ನು ರದ್ದು ಪಡಿಸಬೇಕು . ಕಾನೂನು ರೀತಿ ಷೇರು ಸಂಗ್ರಹಿಸ ಬೇಕು , ನೋಟಿಫಿಕೇಷನ್ ಮೂಲಕ ಎಲ್ಲಾ ಷೇರುದಾರರ ಸಲಹೆ ಪಡೆದು ಚೀಫ್ ಪ್ರಮೋಟರ್‌ನ್ನು ನೇಮಿಸಬೇಕು , ಡಿಆರ್ ರವರನ್ನು ಅಮಾನತ್ತು ಪಡಿಸಬೇಕು , ರೈತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು . ಮುಖಂಡರಾದ ರಾಮಸಾಗರ ಶ್ರೀಧರ್‌ ರೆಡ್ಡಿ , ವಿಜಯ್‌ಶಂಕರ್‌ , ವಿಜಯ ರಾಘವರಡ್ಡಿ , ಅಮು ಲಕ್ಷ್ಮೀನಾರಾಯಣ , ಪದ್ಮನಾಭ ರೆಡ್ಡಿ , ರಾಧಕೃಷ್ಣಾರೆಡ್ಡಿ , ಬಾಲಾಕೃಷ್ಣ , ಶ್ರೀಧರ್‌ರಡ್ಡಿ , ಪ್ರಸನ್ನ , ಚನ್ನಕೇಶವರೆಡ್ಡಿ ಸೇರಿದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂರಾರು ಮಂದಿ ಪಾಲ್ಗೊಂಡಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು