10:46 PM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

27/10/2021, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ

ಡಾ.ಶಿವಶರಣಪ್ಪ ಇತ್ಲಿ ಕರೆ ನೀಡಿದರು.

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಶ್ರಮ ಇರುವಲ್ಲಿ ಸರಸ್ವತಿ ನೆಲೆಸುತ್ತಾಳೆ. ಶಿಕ್ಷಣ ನೀಡುವ ಹಾಗೂ ಪಡೆಯುವ ಉತ್ಸಾಹದ ಜತೆ ಅನುಭವವಿರಬೇಕು. ಜ್ಞಾನಕ್ಕೆ ಪೇಟೆಂಟ್ ಎನ್ನುವುದಿಲ್ಲ. ಶಿಕ್ಷಣ ನೀಡಲು ಸಜ್ಜಾಗಿ ನಿಂತಿರುವ ಕಟ್ಟದ ಹೂರಣ ಅದ್ಭುತವಾಗಿದೆ. ಇಲ್ಲಿನ ಪರಿಸರ ಎಲ್ಲ ಹಂತದಲ್ಲಿ ಪರಿಶುದ್ಧವಾಗಿದೆ. ಹೀಗಾಗಿ ಶಿಕ್ಷಣ ಸಂಸ್ಥೆಗೆ ಸರಸ್ವತಿ ಒಲಿಯಲಿದ್ದಾಳೆ ಎಂದು ಅವರು ಹೇಳಿದರು.

ವರ್ತಕರಾದ ಪಂಪಣ್ಣ ಗುಂಡಳ್ಳಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಜೀವನಕ್ಕೆ ಬೇಕಾದ ನೀತಿಯನ್ನು ಉಪನ್ಯಾಸಕರು ಬೋಧಿಸಬೇಕು. ಈ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಕಾಲೇಜಿಗೆ ಕೀರ್ತಿ ತರುವಂತಹವರು ನಿವಾಗಬೇಕು ಎಂದು ನುಡಿದರು.                           ನೂತನ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖಂಡರಾದ ಮಹಾದೇವಪ್ಪ ಗೌಡ ಪೋಲಿಸ್ ಪಾಟೀಲ್, ಯಲ್ಲೋಜಿರಾವ್ ಕೊರೆಕರ್, ಮಲ್ಲಪ್ಪ ಕುಡತಿನಿ,ಸಂಸ್ಥೆಯ ಅಧ್ಯಕ್ಷರಾಗದ ಸುಭಾಷ್ ಕೊರೆಕರ್,ಖಜಾಂಚಿ ಪಿ ರಾಮು, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು