7:47 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

27/10/2021, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ

ಡಾ.ಶಿವಶರಣಪ್ಪ ಇತ್ಲಿ ಕರೆ ನೀಡಿದರು.

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಶ್ರಮ ಇರುವಲ್ಲಿ ಸರಸ್ವತಿ ನೆಲೆಸುತ್ತಾಳೆ. ಶಿಕ್ಷಣ ನೀಡುವ ಹಾಗೂ ಪಡೆಯುವ ಉತ್ಸಾಹದ ಜತೆ ಅನುಭವವಿರಬೇಕು. ಜ್ಞಾನಕ್ಕೆ ಪೇಟೆಂಟ್ ಎನ್ನುವುದಿಲ್ಲ. ಶಿಕ್ಷಣ ನೀಡಲು ಸಜ್ಜಾಗಿ ನಿಂತಿರುವ ಕಟ್ಟದ ಹೂರಣ ಅದ್ಭುತವಾಗಿದೆ. ಇಲ್ಲಿನ ಪರಿಸರ ಎಲ್ಲ ಹಂತದಲ್ಲಿ ಪರಿಶುದ್ಧವಾಗಿದೆ. ಹೀಗಾಗಿ ಶಿಕ್ಷಣ ಸಂಸ್ಥೆಗೆ ಸರಸ್ವತಿ ಒಲಿಯಲಿದ್ದಾಳೆ ಎಂದು ಅವರು ಹೇಳಿದರು.

ವರ್ತಕರಾದ ಪಂಪಣ್ಣ ಗುಂಡಳ್ಳಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಜೀವನಕ್ಕೆ ಬೇಕಾದ ನೀತಿಯನ್ನು ಉಪನ್ಯಾಸಕರು ಬೋಧಿಸಬೇಕು. ಈ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಕಾಲೇಜಿಗೆ ಕೀರ್ತಿ ತರುವಂತಹವರು ನಿವಾಗಬೇಕು ಎಂದು ನುಡಿದರು.                           ನೂತನ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖಂಡರಾದ ಮಹಾದೇವಪ್ಪ ಗೌಡ ಪೋಲಿಸ್ ಪಾಟೀಲ್, ಯಲ್ಲೋಜಿರಾವ್ ಕೊರೆಕರ್, ಮಲ್ಲಪ್ಪ ಕುಡತಿನಿ,ಸಂಸ್ಥೆಯ ಅಧ್ಯಕ್ಷರಾಗದ ಸುಭಾಷ್ ಕೊರೆಕರ್,ಖಜಾಂಚಿ ಪಿ ರಾಮು, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು